ಪುತ್ತೂರು ಅರುಣ ಸಾರಥಿ ಚಾಲಕರ ಸಂಘಟನೆಯಿಂದ ಧನಸಹಾಯ

0

ಪುತ್ತೂರು: ಗಂಭೀರ ಖಾಯಿಲೆಯಿಂದ ಬಳಲುತ್ತಿರುವ ಕೆಮ್ಮಾಯಿ ನೀರ್ಪಾಜೆ ನಿವಾಸಿ ರಮೇಶ್ ಗೌಡ ಇವರಿಗೆ “ಅರುಣ ಸಾರಥಿ” ಚಾಲಕರ ಸಂಘಟನೆ ವತಿಯಿಂದ 10,000 ರೂ. ಧನಸಹಾಯವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕ ಅರುಣ್ ಪುತ್ತಿಲ ಅವರ ಉಪಸ್ಥಿತಿಯಲ್ಲಿ “ಹಿಂದವಿ” ಕಛೇರಿಯಲ್ಲಿ ನೀಡಲಾಯಿತು.

ಈಗಾಗಲೇ ಪ್ರತೀ ತಿಂಗಳಿಗೆ 10,000 ರೂ.ನಂತೆ ಕಳೆದ 8 ತಿಂಗಳಿನಲ್ಲಿ ರೂಪಾಯಿ 80,000 ಸಾವಿರ ರೂಪಾಯಿ ಧನ ಸಹಾಯವನ್ನು ಅನಾರೋಗ್ಯದಲ್ಲಿರುವವರಿಗೆ ವಿತರಣೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಸಂಘಟನೆಯ ಸದಸ್ಯರಾದ ಸಂದೇಶ್ ನಾಯ್ಕ್ ಕೆಯ್ಯೂರು, ಸಚಿನ್ ವಳತ್ತಡ್ಕ, ಸ್ವಸ್ತಿಕ್ ತಾರಿಗುಡ್ಡೆ, ಪ್ರವೀಣ್ ಕೆಮ್ಮಾಯಿ, ಸುರೇಂದ್ರ ಅಡ್ಲಿಮಜಲು, ಯೋಗೀಶ್ ಕುಕ್ಕಾಡಿ, ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here