ಚೆಸ್: ನೆಲ್ಯಾಡಿ ಬೆಥನಿ ವಿದ್ಯಾಸಂಸ್ಥೆಯ ಶ್ರೀತಿಕ್ ಜಿಲ್ಲಾಮಟ್ಟಕ್ಕೆ ಆಯ್ಕೆ

0

ನೆಲ್ಯಾಡಿ: ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ವಿದ್ಯಾಸಂಸ್ಥೆಯ 7ನೇ ತರಗತಿ ವಿದ್ಯಾರ್ಥಿ ಶ್ರೀತಿಕ್ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಸಂಚಾಲಕರಾದ ಫಾ.ಸಾಮ್ಯುವೆಲ್ ಜಾರ್ಜ್, ಫಾ.ಜೈಸನ್ ಸೈಮನ್, ಪ್ರಾಂಶುಪಾಲ ಫಾ.ವರ್ಗೀಸ್ ಕೈಪನಡ್ಕ, ಉಪಪ್ರಾಂಶುಪಾಲ ಜೋಸ್ ಎಂ.ಜೆ., ಮುಖ್ಯಶಿಕ್ಷಕ ಜಾರ್ಜ್ ಕೆ.ತೋಮಸ್ ಅಭಿನಂದಿಸಿದ್ದಾರೆ. ಈತ ದೇಲಂಪಾಡಿ ಕುಮಾರೇಂದ್ರ ರೈ ಮತ್ತು ಸೌಮ್ಯಲತಾ ಪಾರ್ತಿಪಾಡಿ ದಂಪತಿ ಪುತ್ರ.

LEAVE A REPLY

Please enter your comment!
Please enter your name here