ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೇನಾಲ ಒಕ್ಕೂಟದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಬಡಗನ್ನೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಮೇನಾಲ ಒಕ್ಕೂಟದ ವತಿಯಿಂದ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಆ.13. ನಡೆಯಿತು.

ಜನಜಾಗೃತಿ ವಲಯ ಅಧ್ಯಕ್ಷ ವಿಕ್ರಂ ರೈ ಸಾಂತ್ಯ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಲಯ ಅಧ್ಯಕ್ಷ  ದಿನೇಶ್ ರೈ ಕುತ್ಯಾಳ, ಮೇನಾಳ ಒಕ್ಕೂಟದ ಮಾಜಿ ಅಧ್ಯಕ್ಷ ಬಾಲಕೃಷ್ಣ ರೈ ಮೇನಾಲ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ದೇವಸ್ಥಾನದ ಅರ್ಚಕರಾದ ರವೀಂದ್ರ ಮಾಣಿಲತ್ತಾಯ, ವಲಯ ಮೇಲ್ವಿಚಾರಕರಾದ ಹರೀಶ್ ಕುಲಾಲ್, ಶಂಕರ ಪಟ್ರೋಡಿ, ಒಕ್ಕೂಟದ ಕಾರ್ಯದರ್ಶಿ ಶೀನಪ್ಪ ಯಸ್, ಬಾಬು ನೂಜಿಬೈಲ್, ಗುಮಸ್ತ ಉಮೇಶ್, ಹಾಗೂ ಸುಮಾರು 20 ಮಂದಿ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಸುಂದರ್ ಜಿ  ಸ್ವಾಗತಿಸಿ ವಂದಿಸಿದರು. ದೇವಸ್ಥಾನದ ವತಿಯಿಂದ ಉಪಹಾರದ ವ್ಯವಸ್ಥೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here