ಮಜ್ಜಾರಡ್ಕ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಅರಿಯಡ್ಕ ಗ್ರಾಮದ ಮಜ್ಜಾರಡ್ಕ ಅಂಗವಾಡಿ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಬಾಲವಿಕಾಸ ಸಮಿತಿ ಅಧ್ಯಕ್ಷೆ ಸೌಮ್ಯ ಜನಾರ್ಧನ್ ಮಜ್ಜಾರ್‌ರವರು ಧ್ವಜಾರೋಹಣ ನೆರವೇರಿಸಿದರು. ಅರಿಯಡ್ಕ ಗ್ರಾಪಂ ಸದಸ್ಯ ರಾಜೇಶ್ ಮಣಿಯಾಣಿ, ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಯುವರಾಜ್ ಪೂಂಜ, ಬಿಜೆಪಿ ಬೂತ್ ಅಧ್ಯಕ್ಷ ಪ್ರಸಾದ್, ಬಿಲ್ಲವ ಗ್ರಾಮ ಸಮಿತಿ ಅಧ್ಯಕ್ಷ ಭರತ್ ಓಲ್ತಾಜೆ, ಶಿವರಾಮ ಪಾಟಾಳಿ, ಗಿರೀಶ್ ಮಜ್ಜಾರ್, ಯತಿನ್ ಮಜ್ಜಾರ್ ಸೇರಿದಂತೆ ಅಂಗನವಾಡಿ ಪುಟಾಣಿಗಳ ಪೋಷಕರು,ಗ್ರಾಮಸ್ಥರು ಭಾಗವಹಿಸಿದ್ದರು. ಅಂಗನವಾಡಿ ಶಿಕ್ಷಕಿ ವಸಂತಿ, ಸಹಾಯಕಿ ಹೊನ್ನಮ್ಮ ಸಹಕರಿಸಿದ್ದರು.


LEAVE A REPLY

Please enter your comment!
Please enter your name here