ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಲ್ಲಿ ಧ್ವಜಾರೋಹಣ

0

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯ ಆವರಣದಲ್ಲಿ ನಿವೃತ್ತ ಯೋಧರಾದ ಪ್ರಕಾಶ್ ಕುಕ್ಕಿಲರವರು ಧ್ವಜಾರೋಹಣ ನೆರವೇರಿಸಿದರು.

ಬ್ಯಾಂಕ್ ನ ಅಧ್ಯಕ್ಷರಾದ ಜಗನ್ನಾಥ ಸಾಲಿಯಾನ್.ಹೆಚ್, ಉಪಾಧ್ಯಕ್ಷರಾದ ಮನೋರಂಜನ್ ಕೆ.ಆರ್., ಆಡಳಿತ ಮಂಡಳಿ ಸದಸ್ಯರಾದ ಜಯಂತಿ .ಯಚ್ ರಾವ್, ಶುಭಲಕ್ಷ್ಮಿ, ದಯಾನಂದ ಆಳ್ವ ಕೆ, ಪೂವಪ್ಪ ಎಸ್, ದಿವಾಕರ ವಿ, ಕೇಶವ ಎ, ಗೋವರ್ಧನ್ ಕುಮಾರ್ ಐ, ಭಾಸ್ಕರ್ ಶೆಟ್ಟಿ, ರಾಮದಾಸ ಶೆಣೈ, ಮೋಹನ್ ಕೆ ಎಸ್., ಸತೀಶ್ ಪಿ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೃಷ್ಣ ಮುರಳಿ ಶ್ಯಾಮ್. ಕೆ ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಪ್ರಕಾಶ್ ಕುಕ್ಕಿಲ ಹಾಗೂ ತುಳಸಿದಾಸ್ ಶೆಣೈರವರನ್ನು ಬ್ಯಾಂಕಿನ ವತಿಯಿಂದ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಬ್ಯಾಂಕಿನ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚಂದ್ರಹಾಸ ರಾಣ್ಯ ಡಿ. ರವರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here