ವಿಟ್ಲ: ಬಂಟ್ವಾಳ ತಾಲೂಕು ಪೆರಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬುಡೋಳಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ಬುಡೋಳಿ -ಸೇರಾ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು, ಶಾಲಾ ವಾಹನ ಕಾರು ರಿಕ್ಷಾ ಚಲಾಯಿಸಲು ಹರಸಾಹಸ ಪಡುವಂತಾಗಿತ್ತು. ಇದನ್ನು ಕಂಡ ಬುಡೋಳಿಯ ರಿಕ್ಷಾ ಚಾಲಕರು ರಸ್ತೆ ದುರಸ್ತಿ ಕಾರ್ಯ ನಡೆಸಿದರು. ಇದು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.