ಪುತ್ತೂರು: ಈಶ್ವರಮಂಗಲ ನೆಟ್ಟಣಿಗೆ ಮುಡ್ನೂರು ಗ್ರಾಮದ ನಿವಾಸಿ ಶೋಭಾ ಕೃಷ್ಣರಾಯ ನಿಲಯರವರ ಮನೆಯಲ್ಲಿ ಆ.12ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ನಡೆದಿದ್ದು, ಕಳ್ಳರು ಬಾಗಿಲು ಮುರಿದು ಮನೆಯೊಳಗಿದ್ದ ಗೋಡ್ರೆಜ್ ನ ಬೀಗ ಮುರಿದು ಸುಮಾರು 31 ಗ್ರಾಂ ಬಂಗಾರ ಮತ್ತು ರೂ.5000/- ನಗದನ್ನು ಕಳ್ಳತನ ನಡೆಸಿದ್ದರು.
ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನೆಟ್ಟಿಣಿಗೆ ಮುಡ್ನೂರು ಗ್ರಾಮದ ದಯಾನಂದ್ ನಾಯ್ಕ ಎಂ(29.ವ) ಎಂಬಾತನನ್ನು ಈಶ್ವರಮಂಗಲದಲ್ಲಿ ಬಂಧಿಸಿದ್ದಾರೆ.
ಬಂಧಿತನಿಂದ 30.120 ಗ್ರಾಂ ಬಂಗಾರ ಮತ್ತು ಪ್ರಕರಣಕ್ಕೆ ಉಪಯೋಗಿಸಿದ ಡಿಸ್ಕವರಿ ಬೈಕ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.
ಕಾರ್ಯಾಚರಣೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಕೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ರವರ ಮಾರ್ಗದರ್ಶನದಲ್ಲಿ ಮತ್ತು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ ಮತ್ತು ಪೊಲೀಸ್ ನಿರೀಕ್ಷಕ ರವಿ ಬಿ ಎಸ್ ರವರ ನೇತೃತ್ವದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಉಪನಿರೀಕ್ಷಕರಾದ ಜಂಬುರಾಜ್ ಮಹಾಜನ್ ರವರ ತಂಡ, ಎಎಸ್ಐ ಚಂದ್ರಶೇಖರ್, ಹೆಚ್.ಸಿ ಪ್ರವೀಣ್, ಹೆಚ್.ಸಿ ಮಧು, ಹೆಚ್.ಸಿ , ಹರೀಶ್, ಹೆಚ್.ಸಿ ಸುಬ್ರಹ್ಮಣ್ಯ, ಚಾಲಕರಾದ ಎಆರ್ ಎಸ್ ಐ ಯಜ್ಞ ಹೆಚ್.ಜಿ ಹರಿಪ್ರಸಾದ್ ಮತ್ತು ಹೆಚ್.ಜಿ ನಿತೇಶ್ರವರು ಪಾಲ್ಗೊಂಡಿದ್ದರು.