ರಾಮಕುಂಜ: ಕರ್ನಾಟಕ ವಿದ್ಯಾಭಾರತಿ ದ.ಕ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ಪುಣಚ ದೇವಿನಗರ ಶ್ರೀದೇವಿ ವಿದ್ಯಾಕೇಂದ್ರದ ಸಿಂಧೂರ ಭಾರತಿ ಕ್ರೀಡಾಂಗಣದಲ್ಲಿ ನಡೆದ ದ.ಕ.ಜಿಲ್ಲಾ ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ 14ರ ವಯೋಮಾನದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಹಾಸನದ ಮಂಗಳೂರು ಪಬ್ಲಿಕ್ ಸ್ಕೂಲ್ನಲ್ಲಿ ನಡೆಯುವ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. 17ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಇವರಿಗೆ ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಇವರ ಮಾರ್ಗದರ್ಶನದೊಂದಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಾ, ರಾಘವ, ದಿವ್ಯಾ ಪಿ.ಎನ್. ತರಬೇತಿ ನೀಡಿದ್ದಾರೆ. ಸಂಸ್ಥೆಯ ಆಡಳಿತಾಧಿಕಾರಿ ಆನಂದ ಎಸ್.ಟಿ., ಪ್ರೌಢಶಾಲಾ ಮುಖ್ಯಗುರು ಗಾಯತ್ರಿ ಯು.ಎನ್., ಪ್ರಾಥಮಿಕ ಶಾಲಾ ಮುಖ್ಯಗುರು ಲೋಹಿತಾ, ವ್ಯವಸ್ಥಾಪಕ ರಮೇಶ್ ರೈ, ಶಿಕ್ಷಕ-ಶಿಕ್ಷಕೇತರ ವೃಂದದವರು ಸಹಕರಿಸಿ ಶುಭ ಹಾರೈಸಿದರು.