ಆಲಂಕಾರು: ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ,ಆಲಂಕಾರು ಗ್ರಾಮ ಪಂಚಾಯತ್ ನ ಸಹಕಾರದಲ್ಲಿ ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ತಜ್ವ ವೈದ್ಯರುಗಳ ಉಚಿತ ವೈದ್ಯಕೀಯ ಆರೋಗ್ಯ ತಪಾಸಣೆ ಶಿಬಿರವು ಆ.19ರಂದು ಆಲಂಕಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಶಿಬಿರದಲ್ಲಿ ಸಾಮಾನ್ಯ ರೋಗದ ತಜ್ಞರು, ಎಲುಬು ಮತ್ತು ಕೀಲು ತಜ್ಞರು, ಕಣ್ಣಿನ ತಜ್ಞರು, ಕಿವಿ,ಮೂಗು, ಗಂಟಲು ತಜ್ಞ ವೈದ್ಯರುಗಳು ಎಂಡೋ ಸಂತ್ರಸ್ತರು ಮತ್ತು ವಿಶೇಷಚೇತನರಿಗೆ ವೈದ್ಯಕೀಯ ಆರೋಗ್ಯ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು. ಆಲಂಕಾರು,ಪೆರಾಬೆ ಮತ್ತು ಕುಂತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಂಡೋಪೀಡಿತರು ಹಾಗೂ ವಿಶೇಷಚೇತನರು ಶಿಬಿರದ ಪ್ರಯೋಜನ ಪಡೆದುಕೊಂಡರು.
ಆಲಂಕಾರು ಆರೋಗ್ಯ ಸಮುದಾಯ ಸುರಕ್ಷಾಧಿಕಾರಿ ಬಿನ್ಸಿ ಕುಂತೂರು, ರಮ್ಯ ಆಲಂಕಾರು, ಕುಂತೂರು ಮತ್ತು ಪೆರಾಬೆ ಗ್ರಾಮದ ಆಶಾ ಕಾರ್ಯಕರ್ತೆಯರು ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಆಲಂಕಾರು ಗ್ರಾಮ ಪಂಚಾಯತ್ ನ ಮೋನಪ್ಪ ಬರೆಪುದೇಲು ಪೆರಾಬೆ ಗ್ರಾಮ ಪಂಚಾಯತ್ ನ ಮುತ್ತಪ್ಪ.ಬಿ ಸಹಕರಿಸಿದರು.