ನಿಡ್ಪಳ್ಳಿ: ಯಾದವ ಸಭಾ ಪ್ರಾದೇಶಿಕ ಸಮಿತಿ ವತಿಯಿಂದ ಸೆ.14ರಂದು ಆರ್ಲಪದವು ರಣಮಂಗಲ ಸಭಾ ಭವನದಲ್ಲಿ ನಡೆಯುವ 19ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀಕೃಷ್ಣ ಬೊಳಿಲ್ಲಾಯ ಆ.24 ರಂದು ಬಿಡುಗಡೆಗೊಳಿಸಿದರು. ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ಪದಾಧಿಕಾರಿಗಳು ಹಾಗೂ ಊರಿನ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
