
ಪುತ್ತೂರು: ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ವಿಶೇಷ ಸಾಧನೆಗೈದಿರುವುದರಿಂದ ದ.ಕ.ಜಿ.ಕೇ.ಸಹಕಾರಿ ಬ್ಯಾಂಕಿನಿಂದ 7 ನೇ ಬಾರಿಗೆ ಪ್ರಶಸ್ತಿಗೆ ಆಯ್ಕೆಯಾಗಿರುತ್ತದೆ.
2024-25ನೇ ಸಾಲಿನ ಸಹಕಾರ ಸಂಘದ ಸಾಧನೆಯನ್ನು ಪರಿಗಣಿಸಿ ಅಡಿಟ್ ವರ್ಗೀಕರಣದಲ್ಲಿ “ಎ” ತರಗತಿ ಸ್ಥಾನ ಹೊಂದಿ ಅತ್ಯುತ್ತಮವಾದ ಕಾರ್ಯನಿರ್ವಹಣೆಗಾಗಿ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದ.ಕ.ಜಿ.ಕೇಂದ್ರ ಸಹಕಾರ ಬ್ಯಾಂಕಿನಿಂದ ಕೊಡಲ್ಪಡುವ ಪ್ರಶಸ್ತಿಗೆ ಭಾಜನವಾಗಿರುತ್ತದೆ.
ರೂ.1.15 ಲಕ್ಷ ನಿವ್ವಳ ಲಾಭ:
2024-25ನೇ ಸಾಲಿನಲ್ಲಿ ಸಹಕಾರಿ ಸಂಘವು 4118 ‘ಎ’ ತರಗತಿ ಸದಸ್ಯರನ್ನು ಹೊಂದಿದ್ದು ರೂ. 3 ಕೋಟಿ 41 ಲಕ್ಷ ಪಾಲು ಬಂಡವಾಳ ಹೊಂದಿರುತ್ತದೆ. ಸಹಕಾರಿ ಸಂಘವು ರೂ.22 ಕೋಟಿ 83 ಲಕ್ಷ ಠೇವಣಿ ಹೊಂದಿದ್ದು, ಸದಸ್ಯರ ಹೊರ ಬಾಕಿ ಸಾಲ ರೂ. 32 ಕೋಟಿ 51 ಲಕ್ಷ ಇರುತ್ತದೆ. 2024-25ನೇ ಸಾಲಿನಲ್ಲಿ ರೂ. 265 ಕೋಟಿ 15 ಲಕ್ಷ ವ್ಯವಹಾರ ನಡೆಸಿದ್ದು ಪ್ರಸಕ್ತ ಸಾಲಿನಲ್ಲಿ ರೂ.1 ಕೋಟಿ 15 ಲಕ್ಷ ನಿವ್ವಳ ಲಾಭ ಗಳಿಸಿರುತ್ತದೆ.
ಕಾರ್ಯಕ್ಷೇತ್ರ:
ಆರ್ಯಾಪು ಸಹಕಾರಿ ಸಂಘದ ಕಾರ್ಯ ಕ್ಷೇತ್ರಕ್ಕೆ 3 ಗ್ರಾಮಗಳಾದ ಆರ್ಯಾಪು, ಕೆಮ್ಮಿಂಜೆ ಮತ್ತು ಕುರಿಯ ಗ್ರಾಮಗಳನ್ನೊಳಗೊಂಡಿರುತ್ತದೆ. ಆರ್ಯಾಪು ಗ್ರಾಮದ ಸಂಪ್ಯ ಎಂಬಲ್ಲಿ ಕೇಂದ್ರ ಕಛೇರಿ ಹೊಂದಿದ್ದು, ಕುರಿಯ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಶಾಖಾ ಕಛೇರಿಯನ್ನು ಹೊಂದಿರುತ್ತದೆ. ಆರ್ಯಾಪು ಗ್ರಾಮದ ಸಂಪ್ಯ ಹಾಗೂ ಒಳತ್ತಡ್ಕ ಮತ್ತು ಕುರಿಯ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಪಡಿತರ ಮಾರಾಟ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಹಕಾರಿ ಸಂಘದ ಸದಸ್ಯರು ಮೃತಪಟ್ಟಲ್ಲಿ ತಕ್ಷಣ ರೂ.5000/- ನೀಡುವ ಕಾರ್ಯಕ್ರಮ ಜಾರಿಯಲ್ಲಿರುತ್ತದೆ.
12 ಮಂದಿ ಚುನಾಯಿತ ಸದಸ್ಯರು:
ಆರ್ಯಾಪು ಸಹಕಾರಿ ಸಂಘದ ಆಡಳಿತ ಮಂಡಳಿಯಲ್ಲಿ 12 ಜನ ಚುನಾಯಿತ ಸದಸ್ಯರಿದ್ದು ಅಧ್ಯಕ್ಷರಾಗಿ ಹೆಚ್. ಮಹಮ್ಮದ್ ಆಲಿ, ಉಪಾಧ್ಯಕ್ಷರಾಗಿ ಬಿ. ಸುರೇಂದ್ರ ರೈ ಬಳ್ಳಮಜಲು ನಿರ್ದೇಶಕರುಗಳಾಗಿ ಕೆ. ಸದಾನಂದ ಶೆಟ್ಟಿ ಕೂರೇಲು, ಬಿ. ಗಣೇಶ್ ರೈ ಬಳ್ಳಮಜಲು, ಗಣೇಶ್ ರೈ ತೊಟ್ಲ ಮೂಲೆ, ಶೀನಪ್ಪ ಮರಿಕೆ, ಇಸ್ಮಾಯಿಲ್ ಮಲಾರು, ತಿಮ್ಮಪ್ಪ ನಾಯ್ಕ ಜಂಗಮೊಗೇರು, ಸಂಶುದ್ದೀನ್ ನೀರ್ಕಜೆ. ರಂಜಿತ್ ಬಂಗೇರಾ ಕೆ ಸಂಪ್ಯ, ಚಂದ್ರಕಲಾ ಓಟೆತ್ತಿಮಾರು, ತೆರೆಸಾ ಮಾಗ್ದೆಲಿನ್ ಸಿಕ್ವೇರಾ, ಸತೀಶ್ ನಾಯ್ಕ್ ಪರ್ಲಡ್ಕ, ವಲಯ ಮೇಲ್ವಿಚಾರಕರಾದ ಶರತ್ ಡಿ. ಸಂಘದ ಕಾರ್ಯನಿರ್ವಹಣಾಧಿಕಾರಿ ಜಯಂತಿ ಭಾಸ್ಕರ್ ಹಾಗೂ ಸಿಬ್ಬಂದಿಗಳಾಗಿ ಅಜಿತ್ ಕುಮಾರ್, ಸುಭಾಷಿನಿ, ಉಮೇಶ್ ಎಸ್ ಕೆ. ಅರ್ಜುನ್ ಭಾಸ್ಕರ್, ವಿನಯ್ ಕುಮಾರ್, ಪ್ರಶಾಂತಿ ಎಂ ಕಾರ್ಯನಿರ್ವಹಿಸುತ್ತಿದ್ದಾರೆ.
ಆ.30: ಪ್ರಶಸ್ತಿ ಪ್ರದಾನ…
ಪ್ರಶಸ್ತಿ ಪುರಸ್ಕಾರಕ್ಕೆ ಆಯ್ಕೆಗೊಂಡ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಆ.30ಕ್ಕೆ ನಡೆಯುವ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಕಛೇರಿಯಲ್ಲಿ ನಡೆಯುವ ಬ್ಯಾಂಕಿನ ಮಹಾಸಭೆಯಲ್ಲಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್ ರವರು ಪ್ರಶಸ್ತಿಯನ್ನು ವಿತರಿಸಿ ಸನ್ಮಾನಿಸಲಿದ್ದಾರೆ.
7ನೇ ಬಾರಿ ಪ್ರಶಸ್ತಿ-ಸಂತಸ ತಂದಿದೆ.
ಪ್ರತಿಷ್ಟಿತ ಆರ್ಯಾಪು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಸಂಪ್ಯ ಇದರ 2024-25ರ ಅತ್ಯುತ್ತಮ ಸಾಧನೆಯನ್ನು ಪರಿಗಣಿಸಿ 7ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿಗೆ ಆಯ್ಕೆಯಾಗಿರುವುದು ಅತೀವ ಸಂತಸವಾಗಿದೆ. ಆ.30ರಂದು ದ.ಕ.ಜಿ.ಕೇ.ಸ. ಬ್ಯಾಂಕಿನ ಮಹಾಸಭೆಯಲ್ಲಿ ಈ ಪ್ರಶಸ್ತಿಯನ್ನು ಸ್ವೀಕರಿಸಲಿದ್ದು ಈ ಪ್ರಶಸ್ತಿಗೆ ಕಾರಣಕರ್ತರಾದ ನಮ್ಮ ಸಹಕಾರಿ ಸಂಘದ ಆಡಳಿತ ಮಂಡಳಿಯ ನಿರ್ದೇಶಕರುಗಳಿಗೆ, ಸಹಕಾರಿ ಸಂಘದ ಗೌರವನ್ವಿತ ಸದಸ್ಯರುಗಳಿಗೆ, ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರಕುಮಾರ್ರವರಿಗೆ, ಎಲ್ಲಾ ನಿರ್ದೇಶಕರುಗಳಿಗೆ ಮತ್ತು ನಮ್ಮ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿರವರಿಗೆ ಹಾಗೂ ಸಿಬ್ಬಂದಿ ವರ್ಗದವರಿಗೆ ಹೃತ್ಫೂರ್ವಕ ಕೃತಜ್ಙತೆಗಳನ್ನು ಸಲ್ಲಿಸುತ್ತಿದ್ದೇನೆ.
-ಎಚ್.ಮಹಮ್ಮದ್ ಆಲಿ, ಅಧ್ಯಕ್ಷರು, ಆರ್ಯಾಪು ಪ್ರಾ.ಕೃ.ಪ.ಸ.ಸಂ.ನಿ.