ಈಶ್ವರಮಂಗಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಗಣೇಶೋತ್ಸವ- ಚಾಲನೆ

0

ಪುತ್ತೂರು: ಈಶ್ವರಮಂಗಲದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಚಾಲನೆ ದೊರೆತಿದೆ. ಬೆಳಗ್ಗೆ 8 ಗಂಟೆಗೆ ಶ್ರೀ ಗಣಪತಿಹೋಮ, ವಿಗ್ರಹ ಪ್ರತಿಷ್ಠೆ ನಡೆಯಿತು. ಬಳಿಕ ಭಜನಾ ಕಾರ್ಯಕ್ರಮ ನಡೆಯಿತು..ಮಧ್ಯಾಹ್ನ ೧೨.೩೦ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನೆರವೇರಲಿದೆ.


ಮಧ್ಯಾಹ್ನ 2 ಗಂಟೆಯಿಂದ ಭಕ್ತಿಗೀತೆ ಸ್ಪರ್ಧೆ ನಡೆಯಲಿದ್ದು, 4 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಸಂಜೆ 6 ಗಂಟೆಯಿಂದ ಶ್ರೀ ಗಣೇಶನ ವೈಭವದ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯು ದೇವಸ್ಥಾನದ ವಠಾರದಿಂದ ಹೊರಟು ಈಶ್ವರಮಂಗಲ ಮುಖ್ಯ ಪೇಟೆಯಲ್ಲಿ ಸಾಗಿ, ಪಟ್ಲಡ್ಕ ಹೊಳೆಯಲ್ಲಿ ಗಣೇಶನ ವಿಗ್ರಹವನ್ನು ವಿಸರ್ಜಿಸಲಾಗುತ್ತದೆ.

LEAVE A REPLY

Please enter your comment!
Please enter your name here