ನಿಡ್ಪಳ್ಳಿ ಶ್ರೀ ಶಾಂತದುರ್ಗಾ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಆಚರಣೆ, ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ನಿಡ್ಪಳ್ಳಿ; ಶ್ರೀ ಶಾಂತದುರ್ಗಾ ದೇವಸ್ಥಾನ ಶ್ರೀ ಕ್ಷೇತ್ರ ನಿಡ್ಪಳ್ಳಿ ಇಲ್ಲಿ ಶ್ರೀಗಣೇಶ ಚತುರ್ಥಿ ಪ್ರಯುಕ್ತ ಬೆಳಿಗ್ಗೆ ಸಾಮೂಹಿಕ ಗಣಪತಿ ಹೋಮ ನಂತರ ಮಧ್ಯಾಹ್ನ ಮಹಾ ಪೂಜೆಗೆ ಗಣಪತಿ ಗುಡಿಯಲ್ಲಿ ಮಹಾ ಗಣಪತಿ ದೇವರಿಗೆ ವಿಶೇಷ ನೈವೇದ್ಯ ಸಮರ್ಪಣೆ ಕಾರ್ಯಕ್ರಮ ನಡೆಯಿತು. ನಂತರ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

 ಆಮಂತ್ರಣ ಪತ್ರಿಕೆ ಬಿಡುಗಡೆ;   
ದೇವಸ್ಥಾನದಲ್ಲಿ ಸೆ.22 ರಿಂದ ಅ.2 ರವರೆಗೆ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಡಾ.ರೇಷ್ಮಾ ಮಜಲೋಡಿ ಗುತ್ತು ಇವರು ಬಿಡುಗಡೆ ಗೊಳಿಸಿದರು.

  ಶ್ರೀ ಪೂಮಾಣಿ ಕಿನ್ನಿಮಾಣಿ ಪರಿವಾರ ದೈವಗಳ ದೈವಸ್ಥಾನ ಇದರ ಅನುವಂಶಿಕ ಆಡಳಿತ ಮೊಕ್ತೇಸರ ಪ್ರವೀಣ ಎನ್ ಆರಿಗ ನಿಡ್ಪಳ್ಳಿ ಗುತ್ತು, ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ನಾಗೇಶ ಗೌಡ ಪುಳಿತ್ತಡಿ ಹಾಗೂ ಸದಸ್ಯರು, ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here