ಕರ್ನಾಟಕ ಗಮಕ ಕಲಾ ಪರಿಷತ್ ದ.ಕ.ಜಿಲ್ಲೆ, ಪುತ್ತೂರು ಘಟಕದ ವತಿಯಿಂದ ಗಮಕ ಕಾರ್ಯಕ್ರಮ

0

ಪುತ್ತೂರು: ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ದ.ಕ.ಜಿಲ್ಲೆ, ಪುತ್ತೂರು ತಾಲೂಕು ಘಟಕದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಆ.26 ರಂದು ಗಮಕ ವಾಚನ- ವ್ಯಾಖ್ಯಾನ ಕಾರ್ಯಕ್ರಮ ತೆಂಕಿಲದಲ್ಲಿರುವ ‘ನರೇಂದ್ರ’ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ, ಕುಮಾರವ್ಯಾಸ ಭಾರತದ ಕರ್ಣ ಪರ್ವದಿಂದ ಆಯ್ದ ಕರ್ಣ ಭೇದನ ಎಂಬ ಕಥಾಭಾಗವನ್ನು ಪ್ರಸ್ತುತಪಡಿಸಲಾಯಿತು. ಗಮಕಿ ಚಂದ್ರಶೇಖರ, ಸುಳ್ಯಪದವು ಮತ್ತು
ಗಮಕಿ ಸುರೇಶ್ ಹೆಗ್ಡೆ, ಕುಳದಪಾರೆ, ಗಮಕ ವಾಚನಗೈದರು. ಶ್ರೀ ಅಪ್ಪಕುಂಞ ಯಾದವ್, ಮಿಂಚಿಪದವು ಇವರು ವ್ಯಾಖ್ಯಾನವನ್ನು ನಡೆಸಿಕೊಟ್ಟರು.

ಕಾಲೇಜಿನ ಪ್ರಿನ್ಸಿಪಾಲರಾದ ಪ್ರಸಾದ ಶ್ಯಾನುಭೋಗ ಇವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಲಾ ವಿದ್ಯಾರ್ಥಿನಿಯರಾದ ಸುಷ್ಮಾ ಪ್ರಾರ್ಥಿಸಿ, ಶರಣ್ಯ ನಿರೂಪಿಸಿ, ಹರಿಣಿ ಹಾರ್ಮೋನಿಯಂನಲ್ಲಿ ಸಹಕರಿಸಿದರು. ಘಟಕದ ಅಧ್ಯಕ್ಷರಾದ ವೇದವ್ಯಾಸ ರಾಮಕುಂಜ, ಉಪಾಧ್ಯಕ್ಷರಾದ ವತ್ಸಲಾ ರಾಜ್ಞಿ ಮತ್ತು ಜಯಂತಿ ಹೆಬ್ಬಾರ್ ಕಲಾವಿದರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿ, ಈಶ್ವರ ಭಟ್ ಗುಂಡ್ಯಡ್ಕ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯದರ್ಶಿ ಶಂಕರಿ ಶರ್ಮ ಕಲಾವಿದರನ್ನು ಪರಿಚಯಿಸಿದರು. ವೇದವ್ಯಾಸ ಹಾಗೂ ಶಾಲಾ ಉಪನ್ಯಾಸಕಿ ರೇಣುಕಾ ವಂದಿಸಿದರು. ಗಮಕ ಕಾರ್ಯಕ್ರಮದಲ್ಲಿ ಘಟಕದ ಖಜಾಂಚಿ ವೀಣಾ ಸರಸ್ವತಿ, ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here