ಕರಾಟೆ: ಸಾಂದೀಪನಿಯ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ದಕ್ಷಿಣ ವಲಯ ಇದರ ಆಶ್ರಯದಲ್ಲಿ ಪಿ ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲ ದಲ್ಲಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ ನಡೆಯಿತು.

ಪಂದ್ಯಾಟದಲ್ಲಿ ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಲ್ಲಿ 17ರ ವಯೋಮಾನದ ಹುಡುಗರ ವಿಭಾಗದಲ್ಲಿ ಭುವನ್ ಕರಂದ್ಲಾಜೆ , ತುಷಾರ್, ಪ್ರಥಮ ಸ್ಥಾನ, ಸೃಜನ್ ಎ ದ್ವಿತೀಯ ಸ್ಥಾನ, 14ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ ದ್ವಿತಿ ಕೆ ಎಮ್ ರೈ ಪ್ರಥಮ ಸ್ಥಾನ, ಗೌತಮಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.

ಇದರಲ್ಲಿ ಭುವನ್ ಕರಂದ್ಲಾಜೆ, ತುಷಾರ್ ಮತ್ತು ದ್ವಿತಿ ಕೆ ಎಮ್ ರೈ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ತರಬೇತಿಯನ್ನು ಶಾಲಾ ಕರಾಟೆ ಶಿಕ್ಷಕ ನಾರಾಯಣ ಆಚಾರ್ಯ ನೀಡಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯ ಪ್ರಸನ್ನ ಕೆ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here