ಪುತ್ತೂರು: ಪುತ್ತೂರು ತಾಲೂಕು ಕೃಷಿ ಉತ್ಪನ್ನ ಸಹಕಾರ ಮಾರಾಟ ಸಂಘ ಕ್ಕೆ 2024-25ನೇ ಸಾಲಿನ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸತತ 4ನೇ ಬಾರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.
ಸಂಘದ ಅಧ್ಯಕ್ಷರಾದ ಕೃಷ್ಣಕುಮಾರ್ ರೈ ಕೆದಂಬಾಡಿ ಗುತ್ತು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಳಿಯಪ್ಪ ಗೌಡ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ ಬಿ ಜಯರಾಮ್ ರೈ ಬಳ್ಳಜ್ಜ, ಸಾಜ ರಾಧಾಕೃಷ್ಣ ಆಳ್ವಾ, ಸುಭಾಷ್ ನಾಯಕ್, ಸುಜಾತರಂಜನ್ ರೈ ಮತ್ತಿತರರು ಉಪಸ್ಥಿತರಿದ್ದರು.