ನೆಲ್ಯಾಡಿ; ವಿದ್ಯಾಭಾರತಿ ವತಿಯಿಂದ ಮೂಡಬಿದಿರೆಯ ಕಡಲೆಕೆರೆ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಶ್ರೀ ರಾಮ ಪ್ರೌಢಶಾಲೆಯ 8ನೇ ತರಗತಿ ವಿದ್ಯಾರ್ಥಿ ಹರ್ಷಿತ್ ಗೌಡ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈತ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಮಣಿಕ್ಕಳ ಬಾಳೆಹಿತ್ತಿಲು ನಿವಾಸಿ ಬೆಳಿಯಪ್ಪ ಗೌಡ ಹಾಗೂ ಯಶೋದಾ ದಂಪತಿಯ ಪುತ್ರ.