ಪುತ್ತೂರು: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಭಾನು ಮುಸ್ತಾಕ್ ಅವರ ಆಯ್ಕೆಯನ್ನು ಮರುಪರಿಶೀಲಿಸುವಂತೆ ಆಗ್ರಹಿಸಿ ಪುತ್ತೂರಿನ ಪ್ರಭಾರ ತಹಶೀಲ್ದಾರ್ ನಾಗರಾಜ್ ವಿ. ಅವರ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ಉದ್ಯಮಿ ಬೂಡಿಯಾರು ರಾಧಾಕೃಷ್ಣ ರೈ, ಚಂದ್ರಶೇಖರ್ ಪಾಟಾಳಿ, ಶ್ರೀಧರ ಪೂಜಾರಿ, ಬಾಲಸುಬ್ರಮಣ್ಯ ಭಟ್, ಪ್ರಸನ್ನ ಬಲ್ಲಾಳ್, ಕರ್ನಾಟಕ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಸಮನ್ವಯಕಾರ ಬಾಲಕೃಷ್ಣ ಗೌಡ ಮತ್ತು ಹಿಂದೂ ಜನಜಾಗೃತಿ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.