ಪುತ್ತೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ ನಡೆಸಿದ 2024-25ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಸಮನ್ವಿ ಆರ್ ಶೇಕಡಾ 95.25 ಫಲಿತಾಂಶದೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾರೆ.
ಇವರು ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕ ರಮೇಶ್ ಗೇರುಕಟ್ಟೆ ಹಾಗೂ ಯೆನಪೋಯ ಕಾಲೇಜ್ ಆಫ್ ನರ್ಸಿಂಗ್, ನರಿಂಗಾನ ಇಲ್ಲಿ ಉಪನ್ಯಾಸಕಿಯಾಗಿರುವ ಆಶಾಲತಾ ದಂಪತಿಗಳ ಪುತ್ರಿ. ವಿಟ್ಲದ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ. ನೃತ್ಯೋಪಾಸನ ಕಲಾ ಅಕಾಡೆಮಿ (ರಿ) ಪುತ್ತೂರು ಇದರ ವಿಟ್ಲ ಶಾಖೆಯ ವಿದ್ಯಾರ್ಥಿನಿಯಾಗಿದ್ದು, ವಿದುಷಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯೆ.