ಪುತ್ತೂರು: ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಇವರ ಆಶ್ರಯದಲ್ಲಿ ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಹಾರಾಡಿ ಪುತ್ತೂರು ಇಲ್ಲಿ ನಡೆದ 14ರ ವಯೋಮಾನದ ಬಾಲಕ-ಬಾಲಕಿಯರ ವಲಯಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕ ಮತ್ತು ಬಾಲಕಿಯರ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ಇವರಿಗೆ ಶಾಲಾ ದೈಹಿಕ ಶಿಕ್ಷಕರುಗಳಾದ ದಾಮೋದರ್, ಹರಿಣಾಕ್ಷಿ, ಅಶ್ವಿತಾ ತರಬೇತಿ ನೀಡಿದ್ದರು.