ಪುತ್ತೂರು: ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2024–25ನೇ ಸಾಲಿನ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ಸತತ 5ನೇ ಬಾರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.
ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು. ಸಂಘದ ಅಧ್ಯಕ್ಷ ಸತೀಶ್ ಗೌಡ ಒಳಗುಡ್ಡೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭ ಕೆ. ಪ್ರಶಸ್ತಿ ಸ್ವೀಕರಿಸಿದರು.
ಉಪಾಧ್ಯಕ್ಷ ಅಂಬ್ರೋಸ್ ಡಿ’ ಸೋಜಾ, ಸಂಘದ ನಿರ್ದೇಶಕರಾದ ಪ್ರಮೀಳಾ ಚಂದ್ರಶೇಖರ ಹಾಗೂ ಸುಜಾತ ರಂಜನ್ ರೈ ಉಪಸ್ಥಿತರಿದ್ದರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷರು ಹಾಗೂ “ಸಹಕಾರಿ ರತ್ನ” ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬ್ಯಾಂಕ್ನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್. ಬಿ. ಜಯರಾಮ ರೈ, ಕುಶಾಲಪ್ಪ ಗೌಡ ಬೆಳ್ತಂಗಡಿ, ಮನ್ಮಥ ಸುಳ್ಯ, ಮೊದಲಾದವರು ಉಪಸ್ಥಿತರಿದ್ದರು.