ಪುತ್ತೂರು: ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 2024-25ನೇ ಸಾಲಿನ ಸಾಧನೆಗಾಗಿ ಎಸ್ಡಿಸಿಸಿ ಬ್ಯಾಂಕ್ನಿಂದ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ಕೇಂದ್ರ ಸಹಕಾರಿ ಬ್ಯಾಂಕ್ನ ಮಹಾಸಭೆಯಲ್ಲಿ ಪ್ರಧಾನ ಮಾಡಲಾಯಿತು. ಸಂಘವು 7ನೇ ಬಾರಿಗೆ ಪ್ರಶಸ್ತಿಯನ್ನು ಪಡೆಯುತ್ತಿದ್ದು ಈ ಪ್ರಶಸ್ತಿಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ರವರು ಪ್ರಧಾನ ಮಾಡಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಕುಮಾರ್ ರೈ ದೇರ್ಲ, ಉಪಾಧ್ಯಕ್ಷ ಕೃಷ್ಣ ಕುಮಾರ್ ರೈ ಕೆದಂಬಾಡಿಗುತ್ತು ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ, ಸಂಘದ ನಿರ್ದೇಶಕರೂ ಆಗಿರುವ ಎಸ್.ಬಿ.ಜಯರಾಮ ರೈ, ಡಿಸಿಸಿ ಬ್ಯಾಂಕ್ ನಿರ್ದೇಶಕರುಗಳಾದ ಟಿ.ಜಿ ರಾಜಾರಾಮ್ ಭಟ್, ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಉಪಸ್ಥಿತರಿದ್ದರು.
Home ಇತ್ತೀಚಿನ ಸುದ್ದಿಗಳು ಕೆದಂಬಾಡಿ ಕೆಯ್ಯೂರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಎಸ್ಸಿಡಿಸಿಸಿ ಬ್ಯಾಂಕ್ನಿಂದ 7ನೇ ಬಾರಿಗೆ ಪ್ರಶಸ್ತಿ