ಪುತ್ತೂರು: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಯುನಿವರ್ಸಿಟಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಸ್ಮೃತಿ ಟಿ ರವರು 98.25 ಅಂಕಗಳೊಂದಿಗೆ ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿರುತ್ತಾರೆ. ಇವರು ಪಡ್ನೂರು ಸರಕಾರಿ ಜಿಲ್ಲಾ ಪಂಚಾಯತ್ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿಯಾಗಿದ್ದು ನೃತ್ಯೋಪಸನ ಕಲಾ ಅಕಾಡೆಮಿಯ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ ರವರ ಶಿಷ್ಯೆ. ಬನ್ನೂರು ಬಲಮುರಿ ಅಚ೯ಕರಾದ ಉದಯ ಕೃಷ್ಣ ಮತ್ತು ಕಾವೇರಿ ದಂಪತಿಯ ಪುತ್ರಿ.