ಪುತ್ತೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ ನಡೆಸಿದ 2024-25ನೇ ಸಾಲಿನ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಹಿಮನೀಶ್ ಗೌಡ ಕೆ ಅವರು ಉತ್ತಮ ಅಂಕದೊಂದಿಗೆ ತೇರ್ಗಡೆ ಹೊಂದಿದ್ದಾರೆ.
ಇವರು ಪುತ್ತೂರು ಬಪ್ಪಳಿಗೆ ಅಂಬಿಕಾ ವಿದ್ಯಾಲಯದ 5ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಬನ್ನೂರು ನಿವಾಸಿ ಲೋಕೇಶ್ ಬನ್ನೂರು ಮತ್ತು ಜಯಶೀಲ ದಂಪತಿ ಪುತ್ರ. ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ಯಾರ್ಥಿಯಾಗಿದ್ದು, ನೃತ್ಯಗುರು ವಿದ್ವಾನ್ ದೀಪಕ್ ಕುಮಾರ್, ವಿದ್ವಾನ್ ಗಿರೀಶ್ ಕುಮಾರ್ ಹಾಗು ವಿದುಷಿ ಪ್ರೀತಿಕಲಾ ಅವರ ಶಿಷ್ಯರಾಗಿದ್ದು ನೃತ್ಯಾಭ್ಯಾಸ ಮಾಡುತ್ತಿದ್ದಾರೆ.