ಪುತ್ತೂರು: ಸುಬ್ರಹ್ಮಣ್ಯದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಏರ್ಪಡಿಸಿದ ಗಣೇಶೋತ್ಸವ ಪ್ರಯುಕ್ತದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿ ವತಿಯಿಂದ ‘ನೃತ್ಯೋಹಂ’ ನೃತ್ಯ ವೈವಿಧ್ಯ ಶ್ರೀದೇವಳದ ರಥಬೀದಿಯ ಸಭಾಂಗಣದಲ್ಲಿ ನಡೆಯಿತು.

ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ನಿರ್ದೇಶನದಲ್ಲಿ ಅಕಾಡೆಮಿಯ ವಿದ್ಯಾರ್ಥಿಗಳು ನೃತ್ಯ ಪ್ರಸ್ತುತಪಡಿಸಿದರು. ಹಿರಿಯರಾದ ಯಜ್ಞೇಶ್ ಆಚಾರ್ಯ ಮತ್ತಿತರರು ಸ್ಮರಣಿಕೆ ನೀಡಿ ಗೌರವಿಸಿದರು.