ಪುತ್ತೂರು: ಪರ್ಪುಂಜ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸೆ.9 ರಂದು ಬೆಳಿಗ್ಗೆ 11 ಗಂಟೆಗೆ ಸಂಘದ ವಠಾರದ ರಾಜ್ ಕಾಂಪ್ಲೆಕ್ಸ್ನಲ್ಲಿ ಸಂಘದ ಅಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈಯವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಘದ ಸದಸ್ಯರುಗಳು ಕ್ಲಪ್ತ ಸಮಯದಲ್ಲಿ ಆಗಮಿಸಿ ಸಭೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂಘದ ಅಭಿವೃದ್ಧಿಗೆ ಸೂಕ್ತ ಸಲಹೆ ಸೂಚನೆ ಮಾರ್ಗದರ್ಶನಗಳನ್ನು ನೀಡಬೇಕಾಗಿ ಸಂಘದ ಆಡಳಿತ ಮಂಡಳಿ ಅನುಮತಿ ಮೇರೆಗೆ ಸಂಘದ ಕಾರ್ಯದರ್ಶಿ ಸರೋಜ ಆರ್.ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.