ವಿಟ್ಲ: ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ ಯನ್ನು ವಿಟ್ಲ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಮೋಹನ್ ಗುರ್ಜಿನಡ್ಕರವರ ನೇತೃತ್ವದಲ್ಲಿ ಬ್ಲಾಕ್ ಅಧ್ಯಕ್ಷ ರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ.ಕಾರ್ಯದರ್ಶಿ ಎಂ. ಎಸ್. ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷರಾದ ಡಾ.ರಾಜರಾಮ್ ಕೆ.ಬಿ., ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ಮುರಳೀಧರ ರೈ ಮಠಂತಬೆಟ್ಟು, ತಾಲೂಕು ಗ್ಯಾರಂಟಿ ಇದರ ಅಧ್ಯಕ್ಷರಾದ ಉಮಾನಾಥ ಶೆಟ್ಟಿ ಪೆರ್ನೆ, ಜಿಲ್ಲಾ ಕಾಂಗ್ರೆಸ್ ಸದಸ್ಯರಾದ ರಮನಾಥ ವಿಟ್ಲ ಮೊದಲಾದವರು ಉಪಸ್ಥಿತರಿದ್ದರು.
ಸಭೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀನಿವಾಸ ಶೆಟ್ಟಿ ಕೊಲ್ಯ, ಅಲ್ಪಸಂಖ್ಖಾತ ಘಟಕದ ಅಧ್ಯಕ್ಷರಾದ ನಾಸೀರ್ ಕೋಲ್ಪೆ, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಕರೀಂ ಕುದ್ದು ಪದವು, ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ಸುಧಾಕರ ಪೂಜಾರಿ ಕೇಪು, ವಿಟ್ಲಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾದ ಎಲ್ಯಣ್ಣ ಪೂಜಾರಿ ಮೈರುಂಡ, ಪಟ್ಟಣ ಪಂಚಾಯತ್ ಸದಸ್ಯೆ ಸುನೀತಾ ಕೋಟ್ಯಾನ್, ಬ್ಲಾಕ್ ಉಪಾಧ್ಯಕ್ಷರಾದ ದಿನಕರ ಆಳ್ವ, ಕುಳ ವಲಯ ಅಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅಳಕೆ ಮಜಲು, ಕೇಪು ವಲಯ ಅಧ್ಯಕ್ಷರಾದ ಕೋಟಿ ಪೂಜಾರಿ, ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾದ ಹಂಝ ವಿಟ್ಲ, ಬ್ಲಾಕ್ ಕಾರ್ಯದರ್ಶಿಯಾದ ಲೋಹಿತ್ ಪಿಲಿಂಜ, ಬ್ಲಾಕ್ ಸಂಘಟನಾ ಕಾರ್ಯದರ್ಶಿ ಚೇತನ್ ಓಜಾಲ, ವಿಟ್ಲಮೂಡ್ನೂರು ಬೂತ್ ಅಧ್ಯಕ್ಷರಾದ ನಾರಾಯಣ ಬದಿಗುಡ್ಡೆ, ಪ್ರಮುಖರಾದ ತಾರಾನಾಥ ಪಿಲಿಂಜ ಮೊದಲಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿಟ್ಲ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ಮೋಹನ್ ಗುರ್ಜಿನಡ್ಕ ಸ್ವಾಗತಿಸಿ, ಅಕ್ರಮ ಸಕ್ರಮ ಸದಸ್ಯರಾದ ರಾಮಣ್ಣ ಪಿಲಿಂಜ ವಂದಿಸಿದರು.