ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ವಾಣಿಜ್ಯ ಹಾಗೂ ಕಲಾ ವಿಭಾಗದ ಪೋಷಕರ ಸಭೆ

0

ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಮುಂಬರುವ ಪರೀಕ್ಷೆಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಹಲವು ಮಾಹಿತಿಗಳನ್ನು ಪ್ರಾಂಶುಪಾಲರಾದ ದೇವಿಚರಣ್ ರೈ ಎಮ್. ಪೋಷಕರಿಗೆ ನೀಡಿದರು.

ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಈ ಸಭೆಯನ್ನು ನಡೆಸಲಾಯಿತು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ್ ಶೆಟ್ಟಿಗಾರ್ ಈ ಬಗ್ಗೆ ಮಾಹಿತಿಯನ್ನು ನೀಡಿದರು.
ಪೋಷಕರ ಸಭೆಯಲ್ಲಿ, ಕಾಲೇಜಿನ ವಾಣಿಜ್ಯ ವಿಭಾಗದ, ಕಲಾ ವಿಭಾಗದ, ಭಾಷಾ ವಿಭಾಗದ ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರು ಪಾಲ್ಗೊಂಡರು.

LEAVE A REPLY

Please enter your comment!
Please enter your name here