ಪುತ್ತೂರು: ಮಕ್ಕಳ ಶಿಸ್ತು ಬದ್ಧ ನಡವಳಿಕೆಯಲ್ಲಿ ಪೋಷಕರ ಪಾತ್ರ ಹಿರಿದಾದುದು.ತಪ್ಪಾದಾಗ ತಿದ್ದುವ ,ಸೋತಾಗ ಸ್ಪೂರ್ತಿಯಾಗುವ ಆತ್ಮೀಯ ಗೆಳೆಯರು ನಾವಾಗಬೇಕು. ಆಡಳಿತ ಮಂಡಳಿ ,ಶಿಕ್ಷಕ ವರ್ಗದೊಂದಿಗೆ ನಿಕಟ ಸಂಪರ್ಕವನ್ನಿಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ಶ್ರಮಿಸಬೇಕು.ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ದೃಷ್ಟಿಯಿಂದ ಸಂಸ್ಥೆಯು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ.ಈ ಎಲ್ಲಾ ಕಾರ್ಯಕ್ರಮಗಳು ಯಶಸ್ವಿಯಾಗಬೇಕಾದರೆ ಪೋಷಕರ ಸ್ಪಂದನೆ ಅತೀ ಅಗತ್ಯ ಎಂದು ವಿವೇಕಾನಂದ ಕಾಲೇಜ್ ಆಫ್ ಎಜುಕೇಶನ್ (ಬಿ.ಎಡ್.) ಇದರ ಪ್ರಾಂಶುಪಾಲರಾದ ಡಾ. ಶೋಭಿತಾ ಸತೀಶ್ ರವರು ಹೇಳಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ 2025-26ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಮಹಾಸಭೆಯಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಇನ್ನೋರ್ವ ಮುಖ್ಯ ಅತಿಥಿಯಾಗಿದ್ದ ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿಗಳಾದ ವೆಂಕಟರಮಣ ರಾವ್ ಮಂಕುಡೆ ಇವರು ಮಾತನಾಡುತ್ತಾ , ವಿದ್ಯಾರ್ಜನೆಯೇ ವಿದ್ಯಾರ್ಥಿ ಜೀವನದ ಗುರಿ.ಅಧ್ಯಯನ ಮತ್ತು ಸಹಕಾರ ಮನೋಭಾವವನ್ನು ಮೂಡಿಸುವ ಮೂಲಕ ಅವರನ್ನು ಸಾಧನೆಯ ಹಾದಿಯಲ್ಲಿ ಮುನ್ನಡೆಸುವ ಜವಾಬ್ದಾರಿ ಹೆತ್ತವರದ್ದಾಗಿದೆ.ಪ್ರತಿಯೊಂದು ಮಗುವಿನಲ್ಲಿ ಸಕಾರಾತ್ಮಕ ಚಿಂತನೆಯನ್ನು ಬೆಳೆಸಬೇಕು.ನವ ಭಾರತ ನಿರ್ಮಾಣಕ್ಕೆ ನಮ್ಮ ಯೋಚನಾಶಕ್ತಿಯ ಕೊಡುಗೆಗಳನ್ನು ನೀಡಬೇಕು. ಇಂತಹ ಸಭೆಗಳು ಶಿಕ್ಷಣ ಮತ್ತು ಪಾಲನೆಯ ವಿಷಯಗಳಲ್ಲಿ ಪೋಷಕರ ಉಪಕ್ರಮವನ್ನು ಹೆಚ್ಚಿಸುತ್ತದೆ.ಪೋಷಕರು ಮಕ್ಕಳ ಕಲಿಕೆಗೆ ವಿಶೇಷ ಗಮನ ನೀಡಿದಲ್ಲಿ ಅವರ ಉಜ್ವಲ ಭವಿಷ್ಯದ ಯಶಸ್ಸಿನ ಮಾರ್ಗ ಸುಲಭವಾಗುತ್ತದೆ. ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಬದುಕಲು ಬೇಕಾಗುವ ಕೌಶಲಗಳನ್ನು, ಸಕರಾತ್ಮಕ ವ್ಯಕ್ತಿತ್ವವನ್ನು ರೂಪುಗೊಳಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿರುತ್ತದೆ.ದೇಶದ ಭವಿಷ್ಯವಾದ ಯುವ ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಉತ್ತಮ ವಾತಾವರಣ ಹಾಗೂ ಪೂರಕ ವೇದಿಕೆ ಒದಗಿಸಲು ಶಿಕ್ಷಕರ ಜೊತೆಗೆ ಪೋಷಕರ ಪಾತ್ರವೂ ಮಹತ್ವದ್ದಾಗಿದೆ. ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾಗಿದ್ದ ಶ್ರೀಮತಿ ದೀಪಾ ನಾಯಕ್ ಇವರು ಹೊಸದಾಗಿ ಚುನಾಯಿತರಾದ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳಿಗೆ ಶುಭ ಹಾರೈಸುತ್ತಾ ಕಳೆದ ವರ್ಷದ ವಿದ್ಯಾರ್ಥಿಗಳ ಫಲಿತಾಂಶ ಈಗಿನ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಿರಬೇಕು.ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಪೋಷಕರು ತಮ್ಮ ಬೆಂಬಲವನ್ನು , ಸಲಹೆಗಳನ್ನು ಮತ್ತು ಸಹಕಾರವನ್ನೂ ನೀಡುತ್ತಿರಬೇಕುಎಂದು ಹೇಳಿದರು.
ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಉಮೇಶ್ ನಾಯಕ್ ರವರು ಮಾತನಾಡುತ್ತಾ ,ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕಾರಣ ಶಿಕ್ಷಕರು ಮತ್ತು ಪೋಷಕರು.ಮಕ್ಕಳಲ್ಲಿ ಸದ್ಭಾವನೆಯನ್ನು ತುಂಬಿ ಒಬ್ಬ ಸತ್ಪ್ರಜೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪೋಷಕರ ಪಾತ್ರ ಮಹತ್ವದ್ದು. ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗೆ ಕಾರಣರಾದ ಪೋಷಕರ ಪ್ರೋತ್ಸಾಹ ಇನ್ನೂ ಮುಂದೆಯೂ ಇರಲಿ.ಎಂದು ಹೇಳಿದರು.
ಪ್ರಸಕ್ತ ಸಾಲಿನ ರಕ್ಷಕ-ಶಿಕ್ಷಕ ಸಂಘದ ನೂತನ ಅಧ್ಯಕ್ಷೆ ಅಶ್ವಿನಿ ಕೃಷ್ಣ ಮುಳಿಯ ಇವರು ವಿದ್ಯಾರ್ಥಿಗಳ ಅಭಿವೃದ್ಧಿಯ ಬಗ್ಗೆ ಹಾಗೂ ಸಂಸ್ಥೆಯ ಬಗ್ಗೆ ಒಳ್ಳೆಯ ಅಭಿಪ್ರಾಯವನ್ನು ಎಲ್ಲಾ ಪೋಷಕರ ಪರವಾಗಿ ಮಾತನಾಡಿ ವ್ಯಕ್ತಪಡಿಸಿದರು.ಸಂಸ್ಥೆಯ ಸರ್ವತೋಮುಖ ಬೆಳವಣಿಗೆಗಾಗಿ ತಮ್ಮೆಲ್ಲರ ಸಹಕಾರ ಇರುವುದಾಗಿ ಭರವಸೆ ನೀಡಿದರು.
2025-26 ನೇ ಸಾಲಿನ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಘೋಷಣೆ, ಪೋಷಕರ ಮತ್ತು ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ನಡೆಯಿತು.ಅಧ್ಯಕ್ಷರಾಗಿ ಅಶ್ವಿನಿ ಕೃಷ್ಣ ಮುಳಿಯ , ಉಪಾಧ್ಯಕ್ಷರಾಗಿ ಪ್ರಮೀಳ , ಚಂದಪ್ಪ, ನರೇಂದ್ರ ನಾಯಕ್ ಹಾಗೆಯೇ ಮಕ್ಕಳ ರಕ್ಷಣಾ ಅಧಿಕಾರಿಯಾಗಿ ಪ್ರಮೀಳ ಎನ್. ಮತ್ತು ಸದಸ್ಯರಾಗಿ ಫಕೀರಗೌಡ ಜಿ., ನಾಗರತ್ನ ಎನ್, ವಸಂತ ಪೂಜಾರಿ, ಜಯಂತ ಗೌಡ, ಶಶಿಧರಾ ಸಿ., ಗೋಪಾಲ ಜಿ., ಭವ್ಯ ಯು., ಸುಭಾಶಿಣಿ , ಪಾರ್ವತಿ, ಪ್ರವೀಣ್ ಸರಳಾಯ , ರೇಖಾ ಪ್ರಭು, ಎ. ಸುರೇಶ್ ನಾಯಕ್ , ರಾಧಿಕಾ ಬಿ., ಚೈತ್ರಾ ಎನ್. ನಾಯ್ಕ್, ಪಲ್ಲವಿ, ಹರೀಶ್ ಪೂಜಾರಿ, ವೈದೇಹಿ, ಉಷಾ ಕೆ. ಆಯ್ಕೆಗೊಂಡರು.
ವೇದಿಕೆಯಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಸಂತೋಷ ಬಿ. ಉಪಸ್ಥಿತರಿದ್ದರು. ಸಮಾರಂಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡುತ್ತಾ ಪೋಷಕರು ಸಂಸ್ಥೆಯ ಅಭಿವೃದ್ಧಿಗೆ ರಕ್ಷಕ-ಶಿಕ್ಷಕ ಸಂಘದೊಂದಿಗೆ ಕೈಜೋಡಿಸಬೇಕು ಎಂದು ಹೇಳಿದರು.ಸಂಸ್ಥೆಯ ಚಟುವಟಿಕೆಗಳ ಕುರಿತಾದ ಮಾಹಿತಿಯನ್ನು ಪೋಷಕರ ಮುಂದೆ ಇರಿಸಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಅಪೂರ್ವ ವಂದಿಸಿದರು. ಉಪನ್ಯಾಸಕರಾದ ರೇಣುಕಾ ಕಾರ್ಯಕ್ರಮವನ್ನು ನಿರೂಪಿಸಿದರು.