ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ಕಬಡ್ಡಿ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

0

ರಾಮಕುಂಜ : ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಇದರ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ರಾಮಕುಂಜ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಈ ಪಂದ್ಯಾಟದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಧನ್ವಿ .ಯಂ ಇವರು ಮತ್ತು ಬೆಸ್ಟ್ ರೈಡರ್ ಪ್ರಶಸ್ತಿಯನ್ನು ರಮ್ಯಾ .ಕೆ.ಎಸ್ ಇವರು ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ ,ಜಸ್ವಂತ್ ಹಾಗೂ ಮಂಜುನಾಥ್ ಇವರು ತರಬೇತಿ ನೀಡಿದ್ದರು. ಶಾಲಾ ದೈೆಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಇವರು ಮತ್ತು ಶಾಲಾ ಮುಖ್ಯ ಗುರುಗಳು ಸತೀಶ್ ಭಟ್ ಇವರು ಮಾರ್ಗದರ್ಶನ ನೀಡಿದ್ದರು. ಈ ಸಂದರ್ಭದಲ್ಲಿ ಎಸ್ ಆರ್ ಕೆ ಲ್ಯಾಡರ್ಸ್ ಮಾಲಕರಾದ ಕೇಶವ ಅಮೈ ಇವರು ವರು ವಿದ್ಯಾರ್ಥಿನಿಯರಿಗೆ ಶುಭ ಕೋರಿದರು.

LEAVE A REPLY

Please enter your comment!
Please enter your name here