ಪುತ್ತೂರು: ಪುತ್ತೂರು ಪಡೀಲ್ ನಿವಾಸಿ ಮುದ್ದ ಎಂಬವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿದ್ದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಆರ್ಥಿಕ ನೆರವನ್ನು ಚೆಕ್ ಮೂಲಕ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶ್ರೀರಾಮ್ ಭಟ್ ಪಾತಾಳ, ಪ್ರಧಾನ ಕಾರ್ಯದರ್ಶಿ ಪ್ರೆಮರಾಜ್ ಆರ್ಲಪದವು, ಕೋಶಾಧಿಕಾರಿ ರೂಪೇಶ್ ನಾಯ್ಕ್ ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ ಉಪಸ್ಥಿತರಿದ್ದರು.