ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಪದವಿಪೂರ್ವ ಕಾಲೇಜು, ಕಟೀಲು ಇದರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದಿದೆ.

ತಂಡದಲ್ಲಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಭವಿಷ್, ತೇಜಸ್ ಪಿ ಕೆ, ಸೃಜನ್, ಗೌತಮ್, ತರುಣ್, ಮನ್ವಿತ್ ಬಿ.ಎಲ್, ವನೀಶ್, ಮಿಥುನ್ ಶೆಟ್ಟಿ, ಪ್ರೇಕ್ಷಿತ್ ಹಾಗೂ ಪ್ರಥಮ ಪಿಯುಸಿಯ ತರುಣ್ ಕುಮಾರ್ ಬಿ ಆರ್, ದೇಶ್ಚಿತ್, ಘನಶ್ಯಾಮ, ಲಿಖಿತ್, ಕೀರ್ತನ್, ಸಾತ್ವಿಕ್, ಆಯುಷ್ ಭಾಗವಹಿಸಿದ್ದು , ದ್ವಿತೀಯ ವಿಜ್ಞಾನ ವಿಭಾಗದ ಭವಿಷ್ ಉತ್ತಮ ರಕ್ಷಕ ಪ್ರಶಸ್ತಿಯನ್ನು ಪಡೆದುಕೊಂಡರು. ವಿದ್ಯಾರ್ಥಿಗಳಾದ ಭವಿಷ್, ಗೌತಮ್ ಹಾಗೂ ವನೀಶ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ. ಎಸ್, ಡಾ. ಜ್ಯೋತಿ ಕುಮಾರಿ, ಪವನ್ ಕುಮಾರ್ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತದೆ. ಇವರನ್ನು ಕಾಲೇಜು ಆಡಳಿತಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

LEAVE A REPLY

Please enter your comment!
Please enter your name here