ಪುತ್ತೂರು: ಅಕ್ಟೋಬರ್ 24ರಂದು ತೆರೆ ಕಾಣಲಿರುವ ʼತೆನ್ಕಾಯಿಮಲೆʼ ಕನ್ನಡ ಕಿರುಚಿತ್ರದ ಹಾಡು ಮತ್ತು ಟ್ರೈಲರ್ ಸೆ.12ರಂದು ಸಂಜೆ ಪುತ್ತೂರಿನ ಜಿಎಲ್ ಮಾಲ್ ನಲ್ಲಿ ಬಿಡುಗಡೆಗೊಂಡಿತು.
ಈ ಸಂದರ್ಭದಲ್ಲಿ ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ವಿಜಯ ಸಾಮ್ರಾಟ್ ಸ್ಥಾಪಕ ಅಧ್ಯಕ್ಷರಾದ ಸಹಜ್ ರೈ ಬಳಜ್ಜ, ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಮನ್ಮಥ ಶೆಟ್ಟಿ, ಧರ್ಮ ಚಾವಡಿ ಚಿತ್ರದ ನಿರ್ಮಾಪಕರಾದ ಜಗದೀಶ್ ಅಮೀನ್ ನಡುಬೈಲು, ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಪುತ್ತೂರು ವಲಯದ ಅಧ್ಯಕ್ಷರಾದ ರಘು ಶೆಟ್ಟಿ, ಸುಶಾಂತ್ ಮರಿಲು, ಹಾಡು ಮತ್ತು ಟ್ರೈಲರನ್ನು ವೀಕ್ಷಿಸಿ ಶುಭ ಹಾರೈಸಿದರು.

ನೂರಕ್ಕಿಂತಲೂ ಅಧಿಕ ಕಲಾಪ್ರೇಕ್ಷಕರ ಹಾಗು ಚಿತ್ರದ ತಂಡದ ಕಲಾವಿದರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ಹಿರಿಯ ಖ್ಯಾತ ನಟರಾದ ದೀಪಕ್ ರೈ ಪಾಣಾಜೆ, ಚೇತನ್ ರೈ ಮಾಣಿ ಚಿತ್ರದ ಕುರಿತಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು. ಅದಾದ ಬಳಿಕ ಚಿತ್ರದ ಕುರಿತಾಗಿ ಚಿತ್ರದ ನಿರ್ದೇಶಕರಾದ ರವಿಚಂದ್ರ ರೈ ಮುಂಡೂರು ಮಾತನಾಡಿದರು. ಕಾರ್ಯಕ್ರಮವನ್ನು ಚಿತ್ರದ ಪ್ರಮುಖ ಕಲಾವಿದ ವಿಜೆ ವಿಖ್ಯಾತ್ ಹಾಗು ಚಿತ್ರದ ನಾಯಕಿ ಶ್ರೇಯಾ ಸುಳ್ಯ ನಿರೂಪಿಸಿದರು.
ಹಾಡು Inspire Films YouTube ಚಾನೆಲ್ ನಲ್ಲಿ ಲಭ್ಯವಿದೆ.
