ಸೆ.16: ಸುಳ್ಯಪದವು ಶಬರಿ ನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆ, ಭಜನೆ, ಯಕ್ಷಗಾನ ತಾಳಮದ್ದಳೆ

0

ಸುಳ್ಯಪದವು: ಶಬರಿನಗರ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸೋಣ ಸಂಕ್ರಮಣ’ ಅಂಗವಾಗಿ ಸೆ.16ರಂದು ಸಂಜೆ ಗಂಟ 6 ರಿಂದ ಶಬರಿನಗರ ಸ್ವಾಮಿ ಕೊರಗಜ್ಜ ಬಾಲ ಭಜನಾ ಸಂಘದ ಸದಸ್ಯರಿಂದ ಭಜನಾ ಕಾರ್ಯಕ್ರಮ,ರಾತ್ರಿ ಗಂ 8 ಕ್ಕೆ ಕ್ಷೇತ್ರದಲ್ಲಿ ಸಂಕ್ರಮಣ ಪೂಜೆ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. 

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಾತ್ರಿ ಗಂ.7ರಿಂದ ಬೆಳ್ಳೂರು ಬಂಟ ಮಹಿಳಾ ಸಂಘದ ಸದಸ್ಯರಿಂದ “ಸಂಗರ ನಾಂಧಿ” ಎಂಬ ಪೌರಾಣಿಕ ಯಕ್ಷಗಾನ ತಾಳ ಮದ್ದಳೆ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ನಿಶ್ಮಿತಾ ರೈ. ಎಸ್.ಬಜ, ಚೆಂಡೆ ಮತ್ತು ಮದ್ದಳೆ ವಾದಕರಾಗಿ ದೇವಿ ಪ್ರಸಾದ್ ಮತ್ತು ಆಯುಶ್ ರೈ ಭಾಗವಹಿಸಲಿದ್ದಾರೆ.

ಈ ಎಲ್ಲಾ ಕಾರ್ಯಕ್ರಮದಲ್ಲಿ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೖೆವಗಳ ಕೃಪೆಗೆ ಪಾತ್ರರಾಗುವಂತೆ ಸೇವಾ ಸಮಿತಿ ಅಧ್ಯಕ್ಷ ಬೆಳಿಯಪ್ಪ ಗೌಡ ಶಬರಿನಗರ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಮರದಮೂಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here