ಪುತ್ತೂರು : ಬೆಳಗಾವಿ ಜಿಲ್ಲೆಯ ಖಾನಾಪುರ ಶಾಂತಿನಿಕೇತನ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ವಿದ್ಯಾರ್ಥಿಯು ಉತ್ತಮ ಸಾಧನೆಗೈದಿರುವರು.
9ನೇ ತರಗತಿಯ ಶ್ರೀರಾಮ (ಮುರಳಿಧರ ಕೆ. ಮತ್ತು ಮೀರ ಮುರಳಿ ದಂಪತಿ ಪುತ್ರ) ಇವರು ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿರುತ್ತಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.