ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ಪಿ.ಎಂ.ಶ್ರೀ ಪ್ರೌಢಶಾಲೆ ಬಂಟ್ವಾಳ ನೇತೃತ್ವದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 14ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲಾ ಬಾಲಕಿಯರ ತಂಡವು ಪ್ರಥಮ ಸ್ಥಾನದೊಂದಿಗೆ ಸತತ 5 ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿ ದಾಖಲೆ ಬರೆದಿದೆ.
ಜುವೆನಾ ಡ್ಯಾಝಲ್ ಕುಟಿನ್ಹಾ, ಸನ್ನಿದಿ, ಜೆನಿಟ ಸಿಂಧು ಪಸನ್ನ, ಹಾರ್ದಿಕ ಪಿ, ಘನಶ್ರೀ, ಆಯಿಷಾತ್ ಶಹೀಮ, ಫಾತಿಮತ್ ಅಫ್ರಾ, ದೀಕ್ಷಿತಾ, ಸುಶ್ರಾವ್ಯ, ದಿವ್ಯಾ, ಜ್ಯೋತಿ, ಸಿಂಚನಾ ಕಬಡ್ಡಿ ಆಟಗಾರ್ತಿಯರು ತಂಡದಲ್ಲಿದ್ದು ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಶಾಲಾ ಮುಖ್ಯ ಶಿಕ್ಷಕಿ ಅನಿತಾ ಟ್ರೆಸ್ಸಿ ಮಾರ್ಗದರ್ಶನದಲ್ಲಿ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ತರಬೇತಿ ನೀಡಿದ್ದಾರೆ. ಸೆ.27 ಮತ್ತು 28 ರಂದು ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ನಡೆಯಲಿರುವ ಮೈಸೂರು ವಿಭಾಗ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ.