ರಾಮಕುಂಜ : ದ.ಕ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ಮತ್ತು ಪಿ.ಎಂ.ಶ್ರೀ ಸರಕಾರಿ ಪ್ರೌಢ ಶಾಲೆ ವಿಟ್ಲ ಹಾಗೂ ಕ್ರೀಡಾ ಭಾರತಿ ಮಂಗಳೂರು ಇದರ ಸಹಯೋಗದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ 17ರ ವಯೋಮಾನದ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ರಾಮಕುಂಜ ಶ್ರೀರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದುಕೊಂಡು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ.
ಈ ಪಂದ್ಯಾಟದಲ್ಲಿ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಧನ್ವಿ .ಯಂ ಇವರು ಮತ್ತು ಬೆಸ್ಟ್ ಡಿಫೆಂಡರ್ ಪ್ರಶಸ್ತಿಯನ್ನು ಸಿಂಚನ.ಎಸ್ ಇವರು ಪಡೆದುಕೊಂಡಿರುತ್ತಾರೆ. ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ ,ಜಸ್ವಂತ್ ಹಾಗೂ ಮಂಜುನಾಥ್ ಇವರು ತರಬೇತಿ ನೀಡಿದ್ದರು. ಶಾಲಾ ದೈೆಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಇವರು ಮತ್ತು ಶಾಲಾ ಮುಖ್ಯ ಗುರುಗಳು ಸತೀಶ್ ಭಟ್ ಇವರು ಮಾರ್ಗದರ್ಶನ ನೀಡಿದ್ದರು.