ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಸರಕಾರಿ ಪದವಿಪೂರ್ವ ಕಾಲೇಜು, ಉಪ್ಪಿನಂಗಡಿ ಇದರ ಸಹಯೋಗದಲ್ಲಿ ನಡೆದ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತದೆ. ತಂಡದಲ್ಲಿ ದ್ವಿತೀಯ ಪಿಯುಸಿ ವಿಭಾಗದ ಶಂಕರ ದೊಡ್ಡಮನಿ, ಗೌತಮ್.ಸಿ , ಸಾಯಿಕುಮಾರ್, ಎ.ತಶ್ವಿತ್ ರಾಜ್ ಪೂಜಾರಿ, ಸಿಂಚನ್, ಹೇಮಂತ್ ಜೆ.ಕೆ, ಶ್ರೀನಿವಾಸ್ ಎಚ್.ಟಿ, ಪವನ್ ಕುಮಾರ್ ಹಾಗೂ ಪ್ರಥಮ ಪಿಯುಸಿಯ ಕಿಶನ್ ಕೆ.ವೈ, ಜಿಷ್ಣು ಎನ್,ಪವನ್ ಕುಮಾರ್ , ಯಶ್ವಿತ್ ಕೆ.ಡಿ ಭಾಗವಹಿಸಿದರು. ಪ್ರಥಮ ವಿಜ್ಞಾನ ವಿಭಾಗದ ಜಿಷ್ಣು ಬೆಸ್ಟ್ ರೈಡರ್ ಪ್ರಶಸ್ತಿಯನ್ನು ಪಡೆದುಕೊಂಡರು. ಇವರು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ವಿ ಎಸ್, ಡಾ. ಜ್ಯೋತಿ ಕುಮಾರಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿದ್ದು, ಇವರನ್ನು ಕಾಲೇಜಿನ ಆಡಳಿತಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.