ಪಾಣಾಜೆ: ಆರ್ಲಪದವು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂದಿರದಲ್ಲಿ ನಡೆದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವದ ಆಯ ವ್ಯಯ ಮಂಡನೆ ಹಾಗೂ ಕೃತಜ್ಞತಾ ಸಭೆಯು ಸೆ.21ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಭಜನಾ ಮಂದಿರದಲ್ಲಿ ಜರಗಿತು. ಶ್ರೀ ಗೌರಿ ಗಣೇಶ ಹಬ್ಬ ಸಮಿತಿಯ ಅಧ್ಯಕ್ಷ ಪಿ.ಜಿ. ಶಂಕರ ನಾರಾಯಣ ಭಟ್, ಉಪಾಧ್ಯಕ್ಷ ವಿಶ್ವನಾಥ ಪೂಜಾರಿ ಉಡ್ಡಂಗಳ, ಕಾರ್ಯದರ್ಶಿ ರಾಜೇಶ್ ಪೂಜಾರಿ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಬಾಬು ರೈ ಕೋಟೆ, ಗೌರವಾಧ್ಯಕ್ಷ ಬಾಲಕೃಷ್ಣ ಪೂಜಾರಿ ಉಡ್ಡಂಗಳ, ಕಾರ್ಯದರ್ಶಿ ಗಿರೀಶ್ ಕಡಂದೇಲು ಹಾಗೂ ಸಮಿತಿಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದರು.
