ಒಳಿತು ಮಾಡು ಮನುಷ ಸಾಂತ್ವನ ಸೇವಾಶ್ರಮದಿಂದ ರೋಗಿಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

0

ಪುತ್ತೂರು: ಕೆಮ್ಮಾಯಿ ಭರತಪುರದ ಒಳಿತು ಮಾಡು ಮನುಷ ಸಾಂತ್ವನ ಸೇವಾಶ್ರಮದ ವತಿಯಿಂದ ಊರ, ಪರವೂರ ಸಹೃದಯ ದಾನಿಗಳ ಸಹಕಾರದಿಂದ ಕಿಡ್ನಿ, ಡಯಾಲಿಸಿಸ್ ರೋಗಿಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆಯ 40ನೇ ಯೋಜನೆಯ ಕಾರ್ಯಕ್ರಮ ಸೇವಾಶ್ರಮದಲ್ಲಿ ನಡೆಯಿತು.


ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾಂತಿ ಹೆಗಡೆ ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಪುಡಾ ಅಧ್ಯಕ್ಷ ಅಮಲ ರಾಮಚಂದ್ರ, ರೇವತಿ ಸಾಲ್ಮರ, ಕಾವೇರಿ ಸುಂದರ ನಾಯಕ್ ಬಪ್ಪಳಿಗೆ, ಶಾಮ್ ರಾವ್, ಶ್ರೀಹನುಮಾನ್ ಮಂದಿರದ ಉತ್ಸವ ಸಮಿತಿ ಅಧ್ಯಕ್ಷ ಪ್ರವೀಣ್ ನಾಕ್‌ರವರು ಮಾತನಾಡಿ ಸಾಂತ್ವನ ಸೇವಾಶ್ರಮದಿಂದ ಬಡ ಜನರಿಗೆ ನೀಡುವ ಆಹಾರ ಕಿಟ್ ವಿತರಣಾ ಕಾರ್ಯವನ್ನು ಶ್ಲಾಘಿಸಿದರು. ಅಧ್ಯಕ್ಷತೆ ವಹಿಸಿದ್ದ ಹನುಮಾನ್ ಮಂದಿರ ಸಾಂತ್ವನ ಸೇವಾ ಟ್ರಸ್ಟ್ ಸ್ಥಾಪಕಾಧ್ಯಕ್ಷ ಚೇತನ್ ಗುರೂಜಿ ಮಾತನಾಡಿ ಇದು 40ನೇ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮ ಪ್ರತೀ ತಿಂಗಳೂ ನಡೆಯುತ್ತಿದೆ. ಹಲವಾರು ದಾನಿಗಳು ನಮ್ಮ ಮೇಲೆ ವಿಶ್ವಾಸವಿಟ್ಟು ಆಹಾರ ಕಿಟ್ ವಿತರಣೆಗೆ ಕೈಜೋಡಿಸಿದ್ದಾರೆ. ನಾವು ನಿಮಿತ್ತ ಮಾತ್ರ. ದಾನಿಗಳಿಂದಲೇ ಈ ಕಾರ್ಯಕ್ರಮ ನಡೆಯುತ್ತಿದೆ ಎಂದ ಅವರು ಮುಂದೆಯೂ ನಿಮ್ಮ ಸಹಕಾರ ಇರಲಿ ಎಂದರು.



ಕೃಷ್ಣಪ್ಪ ಶಿವನಗರ ಪ್ರಾಸ್ತಾವಿಕ ಮಾತನಾಡಿದರು. ಒಳಿತು ಮಾಡು ಮನುಷ ಸಾಂತ್ವನ ಸೇವಾಶ್ರಮದ ಅಧ್ಯಕ್ಷೆ ಶೋಭಾಚೇತನ್ ಸ್ವಾಗತಿಸಿ ಉಪಾಧ್ಯಕ್ಷೆ ವನಿತಾ ವಂದಿಸಿದರು. ಸದಸ್ಯರಾದ ಆತ್ಮೀ, ರಾಧಿಕಾ ಪ್ರಾರ್ಥಿಸಿದರು. ಗುರುರಾಜ್ ಕುಕ್ಕಿಪಾಡಿ ಕಾರ್ಯಕ್ರಮ ನಿರೂಪಿಸಿದರು.

ಬಾಕ್ಸ್..

25 ಕುಟುಂಬಗಳಿಗೆ ಕಿಟ್ ವಿತರಣೆ
ದಾನಿಗಳಿಂದ ಸಂಗ್ರಹಿಸಿದ ಧನಸಹಾಯದಲ್ಲಿ 25 ಮಂದಿ ಫಲಾನುಭವಿಗಳಿಗೆ ಗಣ್ಯರು ಆಹಾರ ಕಿಟ್ ವಿತರಿಸಿದರು. ಕಿಟ್ ಸ್ವೀಕರಿಸಿದ ಫಲಾನುಭವಿಗಳು ಅನಿಸಿಕೆ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here