ಕಾಣಿಯೂರು: ಬ್ರಹ್ಮಬೈದರ್ಕಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಕೊರಿಯಾನ ಚಾರ್ವಾಕ ಇದರ ಜೀರ್ಣೋದ್ಧಾರದ ಪ್ರಯುಕ್ತ ಅದೃಷ್ಟ ಚೀಟಿಯ ಕೂಪನ್ ನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಗರಡಿಯ ಸೇವ ಟ್ರಸ್ಟಿನ ಅಧ್ಯಕ್ಷ ಸತ್ಯನಾರಾಯಣ ಕಲ್ಲೂರಾಯ, ಟ್ರಸ್ಟಿನ ಉಪಾಧ್ಯಕ್ಷ ವಸಂತ ದಲಾರಿ, ಟ್ರಸ್ಟಿನ ಕಾರ್ಯದರ್ಶಿ ಬಾಲಕೃಷ್ಣ ರೈ ಕಾಸ್ಪಾಡಿಗುತ್ತು, ಸ್ವಯಂಸೇವಕ ಸಮಿತಿ ಅಧ್ಯಕ್ಷ ನಂದನ್ ಕಜೆ, ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
