ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ದೊಡ್ಡಮನೆ ಕುಟುಂಬಸ್ಥರಿಂದ ಅನ್ನದಾನ ಸೇವೆ

0

ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದಲ್ಲಿ ನವರಾತ್ರಿಯ 6ನೇ ದಿನವಾದ ಸೆ.27ರಂದು ದೊಡ್ಡಮನೆ ಕುಟುಂಬಸ್ಥರಿಂದ ಮಧ್ಯಾಹ್ನ ಅನ್ನದಾನ ಸೇವೆ ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯರ ಪೌರೋಹಿತ್ಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ, ಬೆಳಿಗ್ಗೆ 10ರಿಂದ ಮಾನಸ ಕಲಾ ವೃಂದ ಗುಂಡ್ಯಡ್ಕ, ಪುಣಚ ಇವರಿಂದ ಪ್ರಸಂಗ ‘ಸುದನ್ವಾರ್ಜನ’ ಎಂಬ ಯಕ್ಷಗಾನ ತಾಳಮದ್ದಳೆ ಸೇವೆ, ಮಧ್ಯಾಹ್ನ  ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರುಗಳು, ದೊಡ್ಡಮನೆ ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ಹಲವಾರು ಭಕ್ತಾಧಿಗಳು ಪಾಲ್ಗೊಂಡು ಅನ್ನ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here