ಪುತ್ತೂರು:ಅಳಿಕೆ ಗ್ರಾಮದ ನೆಕ್ಕಿತಪುಣಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮೇಲ್ಛಾವಣಿ ಅಭಿವೃದ್ದಿಗೆ ಅನುದಾನ ನೀಡುವಂತೆ ದೇವಸ್ಥಾನದ ಸಮಿತಿಯವರು ಶಾಸಕ ಅಶೋಕ್ ರೈ ಗೆ ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಟ್ರಸ್ಟಿ ಯಶೋಧರ ಬಂಗೇರ, ಸೇವಾ ಸಮಿತಿ ಮಾಜಿ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಪ್ರವೀಣ ಸಣ್ಣಗುತ್ತು, ಲೋಕೇಶ ಚಂದಾಡಿ ಉಪಸ್ಥಿತರಿದ್ದರು. ವಿಟ್ಲ ಬ್ಲಾಕ್ ಅಧ್ಯಕ್ಷರಾದ ಪದ್ಮನಾಭ ಪೂಜಾರಿ ಸಣ್ಣಗುತ್ತು ಇವರ ನೇತೃತ್ವದಲ್ಲಿ ಶಾಸಕರಿಗೆ ಮನವಿ ಸಲ್ಲಿಸಿದರು.