ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಮಕುಂಜ ಇಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಶ್ರೇಷ್ಠ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನೋತ್ಸವವನ್ನು ಶಾಲಾ ಸಭಾಂಗಣದಲ್ಲಿ ಆಚರಿಸಲಾಯಿತು.
ಸಂಸ್ಥೆಯ ಕಾರ್ಯದರ್ಶಿ ಕೆ.ಸೇಸಪ್ಪ ರೈ ಯವರು ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಣೆಗೈದು ಮಾತನಾಡಿ, ಜಾತಿ, ಧರ್ಮ, ಮತ, ಪಂಥ ಭೇದ ಮರೆತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ಮರಣೀಯ ಕ್ಷಣಗಳನ್ನು ಶಿಕ್ಷಕರು, ವಿದ್ಯಾರ್ಥಿಗಳು ನೆನಪಿಸಿಕೊಳ್ಳಬೇಕು. ದೇಶ ಮತ್ತು ನೆರೆಹೊರೆಯವರನ್ನು ದ್ವೇಷಿಸದೆ ಬಾಳಬೇಕು. ಗಾಂಧೀಜಿಯವರ ಅಹಿಂಸಾ ಮಾರ್ಗ, ಸತ್ಯಾಗ್ರಹಗಳನ್ನು ಅಳವಡಿಸಿಕೊಂಡು ಅವರು ನಡೆದ ಹೆಜ್ಜೆಗಳಲ್ಲಿ ನಾವು ನಡೆಯಬೇಕೆಂದು ಹೇಳಿದರು.
ಸಂಸ್ಥೆಯ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ಸಹಶಿಕ್ಷಕ ಹರೀಶ್ ಆಚಾರ್ಯ ಎಂ.ಸ್ವಾಗತಿಸಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಗಾಯತ್ರಿ ವಂದಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಲೋಹಿತಾ, ಗೈಡ್ಸ್ ಶಿಕ್ಷಕಿಯರಾದ ದಿವ್ಯ ಜಿ, ಸಂಧ್ಯಾ ಹಾಗೂ ಸ್ಕೌಟ್ ಮಾಸ್ಟರ್ ಕಿಶೋರ್ ಕುಮಾರ್ ಬಿ. ಸಹಕರಿಸಿದರು.