ಕೋಡಿಂಬಾಳ: ಗಣತಿ ಮಾಡುತ್ತಿದ್ದ ಶಿಕ್ಷಕಿಯ ಕಾರಿಗೆ ಹಾನಿ : ಆರೋಪಿ ಪೊಲೀಸ್ ವಶಕ್ಕೆ

0

ಕಡಬ: ಗಣತಿ ಕಾರ್ಯ ಮಾಡುತ್ತಿದ್ದ ಶಿಕ್ಷಕಿಯೋರ್ವರ ಕಾರಿನ ಗಾಜನ್ನು ಹೊಡೆದು ಹಾನಿಗೊಳಿಸಿರುವ ಬಗ್ಗೆ ಕಡಬ ಠಾಣೆಗೆ ದೂರು ನೀಡಲಾಗಿದೆ.

ಕೊಣಾಲು ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ರಮಣಿ ಬಿ ಎಂಬವರು ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿ ಕಾರ್ಯಾದ ಕರ್ತವ್ಯಕ್ಕೆ ನೇಮಕಗೊಂಡಿದ್ದು, ಅ.5ರಂದು ಬೆಳಿಗ್ಗೆ ಕೋಡಿಂಬಾಳ ವಾರ್ಡ್ ಸಂಖ್ಯೆ 13ರಲ್ಲಿ ಶಂಕರ ಪಾಜೋವು ಎಂಬವರ ಮನೆಯಲ್ಲಿ ಗಣತಿ ಕಾರ್ಯ ಮಾಡುತ್ತಿದ್ದು, ಕಾರನ್ನು ತುಸು ದೂರದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ಈ ವೇಳೆ ಶಂಕರ ಪಾಜೋವು ಎಂಬವರು ರಸ್ತೆ ಬದಿಯಲ್ಲಿದ್ದ ಕಾರಿಗೆ ಕಬ್ಬಿಣದ ರಾಡ್ ನಿಂದ ಹಾನಿಗೊಳಿಸಿ ಕಾರಿನ ಹಿಂಬದಿ ಗಾಜನ್ನು ಪುಡಿಗೈದಿದ್ದಾರೆ. ಈ ಬಗ್ಗೆ ರಮಣಿಯವರು ಕಡಬ ಠಾಣೆ ಹಾಗೂ ಕಡಬ ತಹಶೀಲ್ದಾರ್ ಅವರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಆರೋಪಿ ಶಂಕರ ಪಾಜೋವುರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here