ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘ(ರಿ) ಪುತ್ತೂರು ಇದರ ಪ್ರಯೋಜಕತ್ವದಲ್ಲಿರುವ ಪುತ್ತೂರು ಎ ಪಿ ಎಂ ಸಿ ರಸ್ತೆಯ ಮಣಾಯಿ ಆರ್ಚ್ ನಲ್ಲಿ ಪ್ರಧಾನ ಕಚೇರಿ ಹೊಂದಿರುವ ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘ ಪುತ್ತೂರು ಇದರ ಮಹಾಲಿಂಗೇಶ್ವರ ಸಭಾಭವನ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಸ್. ಎಂ.ಟಿ ಶಾಖೆಯು ಯಶಸ್ವಿ 4 ವರ್ಷಗಳನ್ನು ಪೂರೈಸಿ 5ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತೀರುವ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ ಎಸ್.ಎಂ.ಟಿ. ಶಾಖಾ ಕಚೇರಿಯಲ್ಲಿ ಗಣಹೋಮ ಹಾಗೂ ಲಕ್ಷ್ಮಿ ಪೂಜೆ ನಡೆಯಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ