
ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ, ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾದ ಸದಸ್ಯ ಸಂಸ್ಥೆ ಇದರ ಆಶ್ರಯದಲ್ಲಿ ಮಂಗಳೂರು ಮಂಗಳಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಈಶ್ವರಮಂಗಲ ಹನುಮಗಿರಿ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಎಸ್ ಆರ್ ರೈ(ದೇಲಂಪಾಡಿ ನಿವಾಸಿ ರಘುನಾಥ ರೈ ಎಸ್ ಕೆ ಮತ್ತು ಮಲ್ಲಿಕಾ ಆರ್ ರೈ ಇವರ ಪುತ್ರಿ) ತ್ರಿವಿಧ ಜಿಗಿತದಲ್ಲಿ ಪ್ರಥಮ
ಹಾಗೂ ಅನಘ ಪಿ (ಕರ್ನೂರು ನಿವಾಸಿ ಪ್ರಭಾಕರ ಪಿ ಮತ್ತು ವಸಂತಿ ಸಿ ಕೆ ದಂಪತಿಗಳ ಪುತ್ರಿ ) 800ಮೀ ಓಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜನಸೇವ ವಿದ್ಯಾ ಕೇಂದ್ರ ಚನ್ನೇನಹಳ್ಳಿ ಬೆಂಗಳೂರು ಇಲ್ಲಿ ನಡೆದ ರಾಜ್ಯಮಟ್ಟ ಹಾಗೂ ದಕ್ಷಿಣ ಭಾರತ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಶಾಂತ್ ರೈ ಹಾಗೂ ಹರ್ಷಿತ್ ಕೆ ಇವರುಗಳು ತರಬೇತಿಯನ್ನು ನೀಡಿರುತ್ತಾರೆ.