ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ದ. ಕ ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಂಟ್ವಾಳ ಹಾಗೂ ವಿಠಲ ಪ್ರೌಢಶಾಲೆ ವಿಟ್ಲ ಇವರ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕನ್ನು ಪ್ರತಿನಿಧಿಸಿದ ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಮೈಸೂರು ವಿಭಾಗಕ್ಕೆ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

14ರ ವಯೋಮಾನದಲ್ಲಿ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಮೈಸೂರು ವಿಭಾಗೀಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ತಂಡದಲ್ಲಿ ಉತ್ತಮ ಸೆಟ್ಟರ್ ಆಗಿ ಮಹಮ್ಮದ್ ಹೂದ್ ಹಾಗೂ ಬೆಸ್ಟ್ ಅಟ್ಯಾಕರ್ ಆಗಿ ಶಿಶಿರ್ ಅತ್ಯುತ್ತಮ ಪ್ರದರ್ಶನ ನೀಡಿ ವೈಯಕ್ತಿಕ ಪ್ರಶಸ್ತಿಗಳನ್ನು ಪಡೆದುಕೊಂಡರು.
17ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಮೊಹಮ್ಮದ್ ಹನೀನ್ ಬೆಸ್ಟ್ ಅಟ್ಯಾಕರ್ ಆಗಿ ವೈಯಕ್ತಿಕ ಪ್ರಶಸ್ತಿಯನ್ನು ಪಡೆದುಕೊಂಡರು.
ಶಾಲಾ ಪ್ರಾಂಶುಪಾಲೆ ಅನಿತಾ ಅವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ನಿರಂಜನ್, ಅಕ್ಷಯ್ ಹಾಗೂ ಹರೀಶ್ ಅವರು ತರಬೇತಿ ನೀಡಿರುತ್ತಾರೆ.