ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬೆಳ್ತಂಗಡಿ ಹಾಗೂ ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇವರ ಸಹಯೋಗದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ್ದ ದರ್ಬೆ ಪಾಂಗಳಾಯಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನಕ್ಕಾಗಿ ತಂಡದ ಆಟಗಾರರಾದ ಮಹಮ್ಮದ್ ಹೂದ್ ಅವರು ಬೆಸ್ಟ್ ಸೆಟ್ಟರ್ ಹಾಗೂ ಶಿಶಿರ್ ಬೆಸ್ಟ್ ಆಲ್ ರೌಂಡರ್ ವೈಯಕ್ತಿಕ ಪ್ರಶಸ್ತಿಗಳನ್ನು ಪಡೆದುಕೊಂಡರು.
ಆಟಗಾರರಾದ ಕ್ಲೈಟನ್ ದೀಕ್ಷನ್ ತೋರಸ್, ಮಹಮದ್ ಅಕ್ಮಲ್, ಆಲನ್ ಡಿಸೋಜಾ, ಜಸ್ವಿನ್, ಅಬೂಬಕ್ಕರ್ ಶಾನ್, ಅಲಿನ್, ರಷಾದ್, ಅನ್ಶೂಲ್, ಮತ್ತು ಫಾಯಿಮ್ ತಂಡದಲ್ಲಿ ಭಾಗವಹಿಸಿದ್ದರು. ಶಾಲಾ ಪ್ರಾಂಶುಪಾಲೆ ಭಗಿನಿ ಅನಿತಾ ಅವರ ಪ್ರೋತ್ಸಾಹ ಮತ್ತು ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುತ್ತಾರೆ.