ಪುತ್ತೂರು: ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆ, ಉರ್ದು ಮತ್ತು ಇತರ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಮೂಲಕ ಆಯೋಜಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರಗೋಷ್ಠಿಯು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕೊಡಿಯಾಲ್ ಬೈಲ್, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರೌಢ ಶಾಲೆಗಳಿಂದ ತಾಲೂಕು ಮಟ್ಟದ ಪ್ರಥಮ ಮತ್ತು ದ್ವಿತೀಯ ಸ್ಥಾನ ವಿಜೇತ ವಿದ್ಯಾರ್ಥಿಗಳು ಭಾಗವಹಿಸಿ “ಕ್ವಾಂಟಮ್ ಯುಗದ ಆರಂಭ : ಸಾಮರ್ಥ್ಯಗಳು ಮತ್ತು ಸವಾಲುಗಳು” ಎಂಬ ವಿಚಾರದ ಬಗ್ಗೆ ವಿಷಯವನ್ನು ಮಂಡಿಸಿದರು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ 9ನೇ ತರಗತಿ ವಿದ್ಯಾರ್ಥಿ ಅತೀತ್ ಹೆಚ್. ರೈ (ಹರೀಶ್ ರೈ ಮತ್ತು ಜಲಜಾ ಹೆಚ್ ರೈ ದಂಪತಿ ಪುತ್ರ) ಅವರ ವಿಷಯ ಮಂಡನೆಗೆ ದ್ವಿತೀಯ ಸ್ಥಾನ ಲಭಿಸಿದೆ.
ಅತೀತ್ ಅವರ ಪ್ರಸ್ತುತಿಯನ್ನು ತೀರ್ಪುಗಾರರು ಜ್ಞಾನಸಮೃದ್ಧಿ ಮತ್ತು ಪರಿಣಾಮಕಾರಿಯೆಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅತೀತ್ ರೈ ಅವರ ಈ ಶ್ರೇಷ್ಠ ಸಾಧನೆಗೆ ಪುತ್ತೂರು ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಾಲಾ ಆಡಳಿತ ಮಂಡಳಿ,ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ಶಿಕ್ಷಕೇತರ ವೃಂದ ರಕ್ಷಕ ಶಿಕ್ಷಕ ಸಂಘದ ಪದಾಧಿಕಾರಿಗಳು, ಸದಸ್ಯರು ಅಭಿನಂದನೆಗಳನ್ನು ಸಲ್ಲಿಸುತ್ತಾರೆ.